...

10 views

A POEM IN KANNADA- karnataka
This poem by Kuvempu is one of my all time favourites. If one can experience a dawn with such divine intensity, one has to be an exalted soul who has reached the zenith of human aesthetic psyche.

ಶಿವಮಂದಿರ ಸಮ ವನಸುಂದರ ಸುಮ ಶೃಂಗಾರದ ಗಿರಿಶೃಂಗಕೆ ಬಾ!
ಬಾ ಫಾಲ್ಗುಣ ರವಿ ದರ್ಶನಕೆ!

ಕುಂಕುಮಧೂಳಿಯ ದಿಕ್ತಟವೇದಿಯೊಳೋಕುಳಿಯಲಿ ಮಿಂದೇಳುವನು
ಕೋಟಿವಿಹಂಗಮ ಮಂಗಲರವರಸನೈವೇದ್ಯಕೆ ಮುದ ತಾಳುವನು
ಚಿನ್ನದ ಚೆಂಡನೆ ಮೂಡುವನು; ಹೊನ್ನನೆ ಹೊಯ್‌ನೀರ್ ನೀಡುವನು
ಸೃಷ್ಟಿಯ ಹೃದಯಕೆ ಪ್ರಾಣಾಗ್ನಿಯ ಹೊಳೆಹರಿಯಿಸಿ ರವಿ ದಯಮಾಡುವನು

ತೆರೆತೆರೆಯಾಗಿಹ ನೊರೆನೊರೆ ಕಡಲೆನೆ ನೋಡುವ ಕಣ್ಣೋಡುವವರೆಗೆ
ಬನಸಿರಿ ತುಂಬಿದ ಕಣಿವೆಯ ಹಂಬಿರೆ ಧೂಳೀಸಮಹಿಮ ಬಾನ್‌ಕರೆಗೆ
ಪ್ರತಿಭೆಯ ಹೋಮಾಗ್ನಿಯ ಮೇಲೆ ಕವಿಮನ ತಾನುರಿದುರಿದೇಳೆ
ಮರಗಿಡದಲಿ ಜಡದೊಡಲಲಿ ಇದೇಕೋ ಸ್ಪಂದಿಸುತಿದೆ ಭಾವಜ್ವಾಲೆ

ವರ್ಣನದಿಂದ್ರಿಯ ನಂದನವನು ದಾಂಟುತೆ ದರ್ಶನ ಮುಕ್ತಿಯ ಸೇರಿ
ವ್ಯಕ್ತಿತೆ ಮೈಮರೆವುದು ಸೌಂದರ್ಯ ಸಮಾಧಿಯೊಳಾನಂದವ ಹೀರಿ
ಸರ್ವೇಂದ್ರಿಯ ಸುಖನಿಧಿ ಅಲ್ಲಿ; ಸರ್ವಾತ್ಮನ ಸನ್ನಿಧಿ ಅಲ್ಲಿ
ಸಕಲಾರಾಧನ ಸಾಧನ ಬೋಧನ ಅನುಭವರಸ ತಾನಹುದಲ್ಲಿ



I SWER ONE OF THE DIFFICULT & DIFFERENT POEM OF MY LIFE


I AM SORRY WHO DON'T KNOW KANNADA I CAN UNDERSTAND YOUR FEELINGS..........